ಡೈಲಿ ವಾರ್ತೆ: 28/Sep/2024

ಶಿವಮೊಗ್ಗದಿಂದ ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

ಶಿವಮೊಗ್ಗ: ಶಿವಮೊಗ್ಗದಿಂದ ಮಂಗಳೂರಿಗೆ ಸಾಗಿಸುತ್ತಿದ್ದ 30 ಕ್ಕೂ ಹೆಚ್ಚು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ರಕ್ಷಣೆ ಮಾಡಿದ ಘಟನೆ ಸೆ. 27 ರಂದು ಶುಕ್ರವಾರ ರಾತ್ರಿ ಶಿವಮೊಗ್ಗ ನಗರದ ಉಷಾ ನರ್ಸಿಂಗ್ ಹೋಂ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಿಂದ ಕ್ಯಾಂಟರ್ ಮೂಲಕ ಒಂದೇ ವಾಹನದಲ್ಲಿ 30 ಕ್ಕೂ ಹೆಚ್ಚು ಜಾನುವಾರುಗಳು ಸಾಗಾಟವಾಗುತ್ತಿತ್ತು. ಎಮ್ಮೆ, ಎತ್ತು, ಹೋರಿ ಸೇರಿದಂತೆ 30 ಕ್ಕೂ ಹೆಚ್ಚು ಜಾನುವಾರುಗಳು ಕ್ಯಾಂಟರ್‌ ನಲ್ಲಿದ್ದವು. ಈ ವೇಳೆ ದಾಳಿ ಮಾಡಿ ಬಜರಂಗದಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕ್ಯಾಂಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಬಜರಂಗದಳ ಕಾರ್ಯಕರ್ತರು ಶುಕ್ರವಾರ ರಾತ್ರಿ ಶಿವಮೊಗ್ಗ ಜಯನಗರ ಪೊಲೀಸ್ ಠಾಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಕ್ಷಣೆ ಮಾಡಿದ ಗೋವುಗಳನ್ನು ಮಹಾವೀರ ಗೋಶಾಲೆಗೆ ರವಾನೆ ಮಾಡಲಾಗಿದೆ.