ಡೈಲಿ ವಾರ್ತೆ: 30/Sep/2024

ಕಾರ್ಕಳ: ಬೈಕ್ ಹಾಗೂ ಮಿನಿ ಲಾರಿ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರ ಸಾವು

ಕಾರ್ಕಳ: ಮಿನಿ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಿಂದ ಒಂದೇ ಕುಟುಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೆ. 30 ರಂದು ಸೋಮವಾರ ಕಾರ್ಕಳ- ಧರ್ಮಸ್ಳಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ನಡೆದಿದೆ.

ಮೃತರು ಸುರೇಶ ಆಚಾರ್ಯ(36), ಸಮೀಕ್ಷಾ (7), ಸುಶ್ಮಿತಾ (5), ಮತ್ತು ಸುಶಾಂತ್ (2) ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ಮೀನಾಕ್ಷಿ ಆಚಾರ್ಯ (32) ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.

ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಬೈಕಿನಲ್ಲಿದ್ದ ನಾಲ್ಕು ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.