ಡೈಲಿ ವಾರ್ತೆ: 30/Sep/2024

ಕೋಟ ಶ್ರೀ ಅಮೃತೇಶ್ವರೀ ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಆನಂದ ಸಿ. ಕುಂದರ್ ಆಯ್ಕೆ

ಕೋಟ, ಸೆ.30: ಕೋಟ ಶ್ರೀಅಮೃತೇಶ್ವರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಆನಂದ ಸಿ. ಕುಂದರ್ ಅವರು ಸೋಮವಾರ ನಡೆದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ
ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಈ ಹಿಂದೆ ದೇಗುಲದ ವ್ಯವಸ್ಥಾಪನ ಸಮಿತಿ
ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಸಮಗ್ರ ಜೀರ್ಣೋದ್ಧಾರ, ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಗಣೇಶ್ ಕೆ.ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್ ಕಾಂಚನ್, ಸುಧಾ
ಎ.ಪೂಜಾರಿ, ರತನ್ ಐತಾಳ, ಸುಭಾಷ್ ಶೆಟ್ಟಿ ಗಿಳಿಯಾರು, ಶಿವ ಪೂಜಾರಿ ಮಣೂರು, ಕೆ. ಚಂದ್ರಶೇಖರ್ ಆಚಾರ್ಯ ಕೋಟ ಮತ್ತು ಅರ್ಚಕ ಪ್ರತಿನಿದಿ ಉಪಸ್ಥಿತರಿದ್ದರು.