ಡೈಲಿ ವಾರ್ತೆ: 02/OCT/2024

ಬೈಂದೂರು ವಲಯ ಛಾಯಾಗ್ರಾಹಕರ ಸಂಘದ ವತಿಯಿಂದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ

ಕುಂದಾಪುರ,ಬೈಂದೂರು ವಲಯ ಛಾಯಾಗ್ರಾಹಕರ ಸಂಘದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಜನ್ಮ ದಿನಾಚರಣೆ ಅಂಗವಾಗಿ ಕುಂದಾಪುರ ಗಾಂಧಿ ಪಾರ್ಕ್ ನಲ್ಲಿರುವ ಗಾಂಧಿ ಪ್ರತಿಮೆ ಮತ್ತು ಶಾಸ್ತ್ರೀಯ ವೃತ್ತದಲ್ಲಿರುವ ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುದರ ಮೂಲಕ ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಸಂಘದ ಸಲಹಾ ಸಮಿತಿ ಅಧ್ಯಕ್ಷರಾದ ದಿನೇಶ್ ಗೋಡೆ,ಛಾಯಾಗ್ರಾಹಕ ಸೊಸೈಟಿಯ ಅಧ್ಯಕ್ಷರಾದ ಗಿರೀಶ್ ಜಿಕೆ,ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನ ಮಠ,ಛಾಯಾಗ್ರಾಹಕ ಸಂಘದ ಗೌರವಾಧ್ಯಕ್ಷರಾದ ಶ್ರೀಧರ್ ಹೆಗ್ಡೆ,ಉಪಾಧ್ಯಕ್ಷರಾದ ಚಂದ್ರಕಾಂತ್,ಕೋಶಾಧಿಕಾರಿ ಹರೀಶ್ ಹಂಗಳೂರು,ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ ಮಠ ಉಪಸ್ಥಿತರಿದ್ದರು.