ಡೈಲಿ ವಾರ್ತೆ: 02/OCT/2024

ರಾಣೆಬೇನ್ನೂರು: ಒಳ ಮೀಸಲಾತಿಗೆ ಆಗ್ರಹಿಸಿ ನಗರದಲ್ಲಿ ರಾಜ್ಯ ಮಾದಿಗರ ಸಂಘಟನೆಯಿಂದ ಬೃಹತ್ ಪ್ರತಿಭಟನೆ

ರಾಣೆಬೇನ್ನೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದೆ.
ಈ ತೀರ್ಪನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ರಾಣೆಬೇನ್ನೂರು ನಗರದಲ್ಲಿ ರಾಜ್ಯ ಮಾದಿಗ ಸಂಘಟನೆ ಒಕ್ಕೂಟ ಬೃಹತ್‌ ಪ್ರತಿಭಟನೆ ನಡೆಸಿದರು.

ನಗರದ ಸಂಗಮ ವೃತ್ತದಿಂದ ಆರಂಭವಾದ ಪ್ರತಿಭಟನೆ ಎಂ.ಜಿ.ರಸ್ತೆ, ಕುರಬಗೇರಿ ರಸ್ತೆ, ಪಿಬಿ ರಸ್ತೆ ಮೂಲಕ ತಹಸೀಲ್ದಾರ್ ಕಚೇರಿಗೆ ತೆರಳಿ ಸರ್ಕಾರಕ್ಕೆ ಆಗ್ರಹಿಸಿದ
ಮುಖಂಡರಾದ ಪುಟ್ಟಪ್ಪ ಮರಿಯಮ್ಮನವರು ಮಾತನಾಡಿ ಪರಿಶಿಷ್ಟ ಜಾತಿಗಳಲ್ಲಿ ಮನೆ ಮಾಡಿರುವ ಅಸಮಾನತೆ ಆತಂಕಕ್ಕೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ತೆರೆ ಎಳೆದಿದೆ.
ರಾಜ್ಯ ಸರ್ಕಾರ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಬೇಕು.
ಹಿಂದುಳಿದ ಜಾತಿಗಳಿಗೆ ಅನ್ವಯಿಸಿದ ಕೆನೆಪದರ ಮಾನದಂಡಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ವಯಿಸುವ ಮಾನದಂಡಗಳು ಭಿನ್ನವಾಗಿರಬೇಕೆಂದು ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿಯ ಜೊತೆಗೆ ಕೆನೆಪದರ ತಳಕು ಹಾಕಿ ವಿಷಯಾಂತರ ಮಾಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಒಳಮೀಸಲಾತಿಯನ್ನು ಜಾರಿಗೊಳಿಸಿಬೇಕು ಎಂದು ಆಗ್ರಹ ಮಾಡಿದರು. ನಂತರ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆ ಸಮಯದಲ್ಲಿ ಮುಖಂಡರಾದ ನೀಲಕಂಠಪ್ಪ ಕುಸಗೂರ, ಪ್ರಕಾಶ ಪೂಜಾರ, ಮೈಲಪ್ಪ ದಾಸಪ್ಪನವರ, ಹೊನ್ನಪ್ಪ ಹೊನ್ನಾಪುರ, ವಿಜಯ ಕೆಳಗಿಮನಿಗ, ಬಿ.ಡಿ. ಸಾವಕ್ಕಳವರ, ಮಲ್ಲೇಶಪ್ಪ ಮದ್ಲೇರ, ಮಂಜುಳಾ ಮಾದರ, ಪಾರವ್ವ ಹರಿಜನ, ಶೇಖವ್ವ ಚಳಗೇರಿ, ಹೊನ್ನಪ್ಪ, ಶೇಖಪ್ಪ ಕಲ್ಲೇಜರ, ಕೆ.ಆರ್.ಉಮೇಶ ಮುಂತಾದವರು ಉಪಸ್ಥಿತರಿದ್ದರು.