ಡೈಲಿ ವಾರ್ತೆ: 03/OCT/2024

ವಿಜಯಪುರ: ಚತುರ್ಮುಖ ಗಣಪನ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಹಾನಿ

ವಿಜಯಪುರ: ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಕಲ್ಲಿನ ಮಂಟಪವನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಇಲ್ಲಿನ ಸಿದ್ದೇಶ್ವರ ದೇವಸ್ಥಾನ ಬಳಿಯ ಗಣಪತಿ ಚೌಕ್ ನಲ್ಲಿ ಈ ಘಟನೆ ನಡೆದಿದೆ. ಚತುರ್ಮುಖ ಗಣಪನ ಮೂರ್ತಿ ಇರುವ ಕಲ್ಲಿನ ಮಂಟಪಕ್ಕೆ ಕಿಡಿಗೇಡಿಗಳು ಕಲ್ಲು ತೂರಿ ಮಂಟಪದ ಎರಡು ಗಾಜುಗಳನ್ನು ಪುಡಿ-ಪುಡಿ ಮಾಡಿದ್ದಾರೆ.

ವಿಷಯ ತಿಳಿದು ಸ್ಥಳದಲ್ಲಿ‌ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಸ್ಥಳೀಯ ಜನರು ಜಮಾವಣೆಗೊಂಡಿದ್ದಾರೆ. ಅಲ್ಲದೇ, ಸ್ಥಳಕ್ಕೆ ಗಾಂಧಿ ಚೌಕ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ