ಡೈಲಿ ವಾರ್ತೆ: 03/OCT/2024

ಕುಂದಾಪುರ ಬಿಜೆಪಿ ಒಬಿಸಿಮೋರ್ಚಾದಿಂದ ಸೇವಾ ಪಾಕ್ಷಿಕ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜಯಂತಿಯ ಪ್ರಯುಕ್ತ ಸೇವಾ ಪಾಕ್ಷಿಕ ಅಂಗವಾಗಿ ಕುಂದಾಪುರ ನಗರದ ಹೃದಯ ಭಾಗದಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀಯವರ ಹಾಗೂ ಗಾಂಧೀಜಿಯವರ ಪುತ್ತಳಿಗೆ ಕುಂದಾಪುರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ ಸಂಗಮ್ ಇವರು ಹೂವಿನ ಹಾರವನ್ನು ಸಮರ್ಪಿಸಿ ಅವರ ಪುಣ್ಯ ಸ್ಮರಣೆ ಮಾಡಿದ್ದರು, ಸೇವಾ ಪಾಕ್ಷಿಕ ಕಾರ್ಯಕ್ರಮದ ಬಗ್ಗೆ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ
ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ,, ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಮಂಗಳೂರು ಸಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ನಾಗರಾಜ್ ಆಚಾರ್ಯ, ಸುಧೀರ್ ಪೂಜಾರಿ ಕೋಟ, ಓಬಿಸಿ ಮೋರ್ಚಾದ ಪದಾಧಿಕಾರಿಗಳು, ಹಾಗೂ ವಿವಿಧ ಮೋರ್ಚಾದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.