ಡೈಲಿ ವಾರ್ತೆ: 09/OCT/2024

 ಸ್ಪರ್ಧಾತ್ಮಕ ಯುಗದಲ್ಲಿ ಪೂರ್ವ ತಯಾರಿ ಅಗತ್ಯ-ಚೈತ್ರಾ

ಬ್ರಹ್ಮಾವರ: ವಿದ್ಯಾರ್ಥಿಗಳು ಈ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗವನ್ನು ಹೇಗೆ ದೊರಕಿಸಿಕೊಳ್ಳಬೇಕು. ಅದಕ್ಕೆ ಬೇಕಾದಂತಹ ಪೂರ್ವ ತಯಾರಿಯನ್ನು ಹೇಗೆ ನಡೆಸಬೇಕು ಎನ್ನುವ ಬಗ್ಗೆ ಮಾಹಿತಿ ಮಾರ್ಗದರ್ಶನ ಅತ್ಯಗತ್ಯ ಎಂದು ಚೆನೈಯ ಬೌಂಟಿಯಸ್‌ ಸಂಸ್ಥೆಯ ತಾಂತ್ರಿಕ ಕಾರ್ಯಕ್ರಮದ ನಿರ್ವಾಹಕಿ ಚೈತ್ರಾ ಎನ್‌ ಹೇಳಿದರು.

ಬ್ರಹ್ಮಾವರ ಕ್ರಾಸ್‌ಲ್ಯಾಂಡ್‌ ಕಾಲೇಜಿನಲ್ಲಿ ಬುಧವಾರ ಮಹಿಳಾ ವೇದಿಕೆ ಮತ್ತು ವ್ಯಕ್ತಿತ್ವ ವಿಕಸನ ಕೋಶದ ಪ್ರಸಕ್ತ ಸಾಲಿನ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಕಾರಾತ್ಮಕ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ.ರಾಬರ್ಟ್‌ ಕ್ಲೈವ್‌ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ವೇದಿಕೆ ಸಂಚಾಲಕಿ ಪೂರ್ಣಿಮಾ ಸ್ವಾಗತಿಸಿದರು. ವಿದ್ಯಾರ್ಥಿಯನಿಯರಾದ ಲವಿಟಾ ವಂದಿಸಿದರು. ಬರ್ನಿಸ್‌ ಲಿಲ್ಲಿ ಥಾಮಸ್‌ ಕಾರ್ಯಕ್ರಮ ನಿರೂಪಿಸಿದರು.