ಡೈಲಿ ವಾರ್ತೆ: 17/OCT/2024

ಸಕಲೇಶಪುರದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ ಆನೆ ಸಾವು

ಹಾಸನ: ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದ ಬಳಿ ಕಾಡಾನೆಯೊಂದು ವಿದ್ಯುತ್​ ತಂತಿ ಸ್ಪರ್ಶಿಸಿ ಸಾವಿಗೀಡಾದ ಘಟನೆ ಗ್ರಾಮದ ಬಿಎಸ್​​ಎನ್​ಎಲ್​ ಟವರ್ ಬಳಿ ನಡೆದಿದೆ.

25 ವರ್ಷದ ಕಾಡನೆಯೊಂದು ಆಹಾರ ಅರಸಿ ಗ್ರಾಮದ ಬಳಿ ಬಂದಿತ್ತು. ಈ ವೇಳೆ ವಿದ್ಯುತ್​​ ತಂತಿಗೆ ಆನೆಯ ಸೊಂಡಿಲು ತಾಗಿ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಜಪಡೆ ದಾಳಿಯಿಂದ ಭತ್ತದ ಗದ್ದೆ ನಾಶ
ಮತ್ತೊಂದಡೆ ಕಾಡಾನೆ ದಾಳಿಗೆ ಅಪಾರ ಪ್ರಮಾಣದ ಭತ್ತ ನಾಶವಾಗಿದೆ. ಇದೇ ಸಕಲೇಶಪುರ ತಾಲೂಕಿನ ಮಲಗಳ್ಳಿ ಗ್ರಾಮದ ಭತ್ತದ ಗದ್ದೆಗಳಿಗೆ ಇಂದು (ಅ.17) ಮುಂಜಾನೆ ಕಾಡಾನೆಗಳ ಹಿಂಡು ನುಗ್ಗಿದೆ. ಆನೆಗಳು ಭತ್ತದ ಬೆಳೆಯನ್ನು ತುಳಿದು, ತಿಂದು ನಾಶ ಮಾಡಿವೆ. ಗ್ರಾಮದ ಹೂವಣ್ಣ, ರುದ್ರಯ್ಯ, ಚಿನ್ನಪ್ಪ, ಹೇಮಂತ್, ಉಮೇಶ್ ಎಂಬುವವರಿಗೆ ಸೇರಿದ ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿವೆ.