ಡೈಲಿ ವಾರ್ತೆ: 21/OCT/2024

ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು – ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಚಿತ್ತಾಪುರ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಗಿಣಾ ನದಿಗೆ ಬಿದ್ದು ಚಾಲಕ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ದಂಡೋತಿ ಸಮೀಪ ಭಾನುವಾರ ರಾತ್ರಿ ನಡೆದಿದೆ.

ಚಿತ್ತಾಪುರ ಪಟ್ಟಣದ ಬಹಾರಪೇಠ್ ನಿವಾಸಿ ನಿಂಗಪ್ಪ ಪೂಜಾರಿ (50) ಮೃತಪಟ್ಟ ದುರ್ದೈವಿ.

ಘಟನೆಯಲ್ಲಿ ಕೃಷ್ಣಾ ಮತ್ತು ಉಮೇಶ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಚಿತ್ತಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಸೇಡಂನಿಂದ ಚಿತ್ತಾಪುರಕ್ಕೆ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.