ಡೈಲಿ ವಾರ್ತೆ: 22/OCT/2024

ಚುನಾವಣೆ ಬಹಿಷ್ಕರಿಸಿದಂತೆ ಹಾಲಿ ಹಾಗೂ ಮಾಜಿ ಶಾಸಕರಿಂದ ಮನವಿ

ಕುಂದಾಪುರ:ಆ 22 ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯು ನಿನ್ನೆ ಸೋಮವಾರ ದಿವಸ ನಡೆದಿದ್ದು ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರೋಧಿಸಿ ಚುನಾವಣೆ ಬಹಿಷ್ಕರಿಸುವ ನಿರ್ಧಾರಕ್ಕೆ ಬೆಳ್ವೆ ಗ್ರಾಮ ಪಂಚಾಯತ್ ಸದಸ್ಯರು ಬಂದಿದ್ದು ,ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಹಾಗೂ ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ಭೇಟಿ ನೀಡಿ

ಚುನಾವಣೆ ಬಹಿಷ್ಕರಿಸಿದಂತೆ ಮನ ಪರಿವರ್ತನೆ ಮಾಡಿ, ತದನಂತರ ಎಲ್ಲ ಸದಸ್ಯರು ಚುನಾವಣೆಯ ಪ್ರಕ್ರಿಯೆಯಲ್ಲಿ ಭಾಗವಹಿಸಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಕ್ಷೇತ್ರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಪಕ್ಷದ ಪ್ರಮುಖರಾದ ಸಂಪತ್ ಕುಮಾರ್ ಶೆಟ್ಟಿ, ಹಾಗೂ ಬೆಳ್ವೆ ಗ್ರಾಮ ಪಂಚಾಯತ್ ಸದಸ್ಯರು
ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.