ಡೈಲಿ ವಾರ್ತೆ: 22/OCT/2024

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ ಮೂವರು ಮೃತ್ಯು – ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು ಮೂವರು ಮೃತಪಟ್ಟ ಘಟನೆ ಅ. 22 ರಂದು ಮಂಗಳವಾರ ನಡೆದಿದೆ.

ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಪೊಲೀಸ್ ಇಲಾಖೆ ಮೂಲಗಳಿಂದ ತಿಳಿದುಬಂದಿದ್ದು, ಸದ್ಯ ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರತೆಗೆದಿದ್ದಾರೆ. ಇನ್ನು ಮೂವರನ್ನು ರಕ್ಷಣೆ ಮಾಡಿದ್ದು, ಇನ್ನುಳಿದಕಾರ್ಮಿಕರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಕಟ್ಟಡ ಕುಸಿಯುತ್ತಿದ್ದಂತೆಯೇ ಅವಶೇಷಗಳಡಿಯಲ್ಲಿ ಸಿಲುಕಿದ್ದ ಕಾರ್ಮಿಕನೋರ್ವ ರಕ್ತ ಸಿಕ್ತ ಸ್ಥಿತಿಯಲ್ಲಿ ಆಚೆ ಬಂದಿದ್ದು, ಕಾರ್ಮಿಕನ ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿದೆ. ಇನ್ನು ರಕ್ತದ ಮಡುವಿನಲ್ಲೇ ಅಳುತ್ತ ನಮ್ಮವರು ಒಳಗೆ ಸಿಲುಕಿದ್ದಾರೆಂದು ಎಂದು ಮಾಹಿತಿ ನೀಡಿದ್ದಾನೆ. ಒಳಗೆ ಇನ್ನು ಕಾರ್ಮಿಕರು ಇದ್ದಾರೆ ಎನ್ನುವುದು ಖಚಿತವಾಗುತ್ತಿದ್ದಂತೆಯೇ ರಕ್ಷಣಾ ಕಾರ್ಯಚರಣೆ ಚುರುಕುಗೊಂಡಿದೆ.