ಡೈಲಿ ವಾರ್ತೆ: 25/OCT/2024

ಅಥಣಿ: ಮಕ್ಕಳ ಕಿಡ್ನಾಪ್ ಪ್ರಕರಣ – ದುಷ್ಕರ್ಮಿಯ ಕಾಲಿಗೆ ಗುಂಡು ಹೊಡೆದು ಮಕ್ಕಳನ್ನು ರಕ್ಷಿಸಿದ ಪೊಲೀಸರು.!

ಚಿಕ್ಕೋಡಿ:ಮನೆಗೆ ನುಗ್ಗಿ ಮಕಳ್ಳನ್ನು ಅಪಹರಿಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಮೇಲೆ ಅಥಣಿ ಪೊಲೀಸರು ಫೈರಿಂಗ್ ಮಾಡಿ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರನ್ನು ಬಂಧಿಸಿದ್ದಾರೆ.

ಚಿಕ್ಕೋಡಿ ತಾಲೂಕಿನ ರವಿಕಿರಣ ಕಮ್ಲಾಕರ್, ಬಿಹಾರದ ಮೂಲದ ಸದ್ಯ ಮುಂಬೈ ನಿವಾಸಿ ಶಾರುಖ್ ಶೇಖ್ ಮತ್ತು ಕೊಲ್ಹಾಪುರ ಜಿಲ್ಲೆಯ ಸಂಬಾ ಕಾಂಬಳೆ ಬಂಧಿತ ಆರೋಪಿಗಳು.

ಗಾಯಗೊಂಡ ಸಿಬ್ಬಂದಿ ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟ್ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ನುಗ್ಗಿ ಅವರ 4 ಮತ್ತು 3 ವರ್ಷದ ಮಕ್ಕಳನ್ನು ಅಪಹರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ವಿಷಯ ತಿಳಿದು ಕೂಡಲೇ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು ಮೂರು ತಂಡ ರಚಿಸಿ ಕಾರ್ಯಾಚರಣೆಗೆ ಇಳಿದಿದ್ದರು. ಮಹಾರಾಷ್ಟ್ರ ಗಡಿಯಾದ ಕೋಹಳ್ಳಿ ಸಿಂಧೂರ್ ಮಾರ್ಗ ಮಧ್ಯದಲ್ಲಿ ಅಪಹರಣಕಾರರನ್ನು ಪೊಲೀಸರು ತಡೆಗಟ್ಟಿದ್ದರು.
ಈ ವೇಳೆ, ಪೊಲೀಸರು ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಆತ್ಮರಕ್ಷಣೆಗೆ ಓರ್ವ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಬಂಧಿತ ಕೊಲ್ಲಾಪುರ ಜಿಲ್ಲೆ ಹಾತ್ ಕನಗಲಾ ಗ್ರಾಮದ ಸಂಬಾ ರಾವಸಾಬ ಕಾಂಬಳೆ ಎಂದು ಗುರುತಿಸಲಾಗಿದ್ದ, ಆತನನ್ನು ಅಥಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಳಗಾವಿ ಎಸ್​ಪಿ ಭೀಮಾಶಂಕರ್ ಗುಳೇದ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಜಮೀರ್ ಡಾಂಗೆ ಹಾಗೂ ರಮೇಶ್ ಹಾದಿಮನಿ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಕೂಡ ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಕ್ಕಳ ತಂದೆ ವಿಜಯ್ ದೇಸಾಯಿ ಕೊಟ್ಟ ಹಣ ವಾಪಾಸ್ ಕೊಡದಿದ್ದಕ್ಕೆ ಕಿಡ್ನಾಪ್ ಆರೋಪ: ಹಣ ಡಬಲ್ ಮಾಡಿಕೊಡುವುದಾಗಿ ಆರೋಪಿಗಳ ಬಳಿ ಕೋಟ್ಯಾಂತರ ರೂಪಾಯಿ ಪಡೆದಿದ್ದ ವಿಜಯ್ ದೇಸಾಯಿ. ಹಣ ಕೊಡುವಂತೆ ಹಲವು ದಿನಗಳಿಂದ ವಿಜಯ್ ಗೆ ಪೀಡಿಸುತ್ತಿದ್ದ ಆರೋಪಿಗಳು.

ಹಣ ಕೊಡದಿದ್ದಾಗ ಮಕ್ಕಳನ್ನ ಕಿಡ್ನಾಪ್ ಮಾಡಿ ಕೊಟ್ಟ ಹಣ ವಾಪಾಸ್ ಗೆ ಡಿಮ್ಯಾಂಡ್: ವಿಜಯ್ ದೇಸಾಯಿಗೆ ಹಣ ಕೊಟ್ಟು ಮಕ್ಕಳನ್ನ ಬಿಡಿಸಿಕೊಂಡು ಹೋಗುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಈ ಆಧಾರದ ಮೇಲೆ ಆರೋಪಿಗಳ ಬೆನ್ನು ಬಿದ್ದಿದ್ದ ಅಥಣಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.