ಡೈಲಿ ವಾರ್ತೆ: 26/OCT/2024

ಕೋಟೇಶ್ವರ: ಬೀಜಾಡಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು – ಓರ್ವನ ಶವ ಪತ್ತೆ, ಇನ್ನೋರ್ವನಿಗಾಗಿ ಹುಡುಕಾಟ

ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲದ ಘಟನೆ ಅ. 26 ರಂದು ಶನಿವಾರ ಬೆಳಿಗ್ಗೆ ಕೋಟೇಶ್ವರದ ಬೀಜಾಡಿಯ ಅಮಾವಾಸ್ಯೆ ಕಡು ಎಂಬಲ್ಲಿ ಸಂಭವಿಸಿದೆ.

ಸಮುದ್ರದ ಅಲೆಗೆ ಕೊಚ್ಚಿಹೋದ ದುರ್ದೈವಿ ಯುವಕರು ಸಂತೋಷ (23) ಅಜೇಯ(22) ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಸಂತೋಷ್ ನ ಮೃತದೇಹ ಪತ್ತೆಯಾಗಿದ್ದು
ಇನ್ನೋರ್ವ ಅಜೇಯ್ ಗಾಗಿ ಹುಡುಕಾಟ ನಡೆಯುತ್ತಿದೆ.

ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ.
ಅದರಂತೆ ಇಂದು ಬೆಳಿಗ್ಗೆ ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಇಬ್ಬರು ಸಮುದ್ರದ ಅಲೆಗೆ ಸಿಲುಕಿ ನೀರುಪಾಲಾಗಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಸಂತೋಷ್ ನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿರುತ್ತಾರೆ.
ಇನ್ನೋರ್ವ ಮೂಲತ ಕುಂದಾಪುರದ ಆನಗಳ್ಳಿ ಅಜೇಯ್ ಗಾಗಿ ಹುಡುಕಾಟ ನಡೆಯುತ್ತಿದೆ.

ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.