ಡೈಲಿ ವಾರ್ತೆ: 05/ಫೆ. /2025

ಕೊಕ್ಕರ್ಣೆ| ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ, ಮಹಿಳೆ ಮೃತ್ಯು, ಇಬ್ಬರಿಗೆ ಗಂಭೀರ ಗಾಯ!

ಬ್ರಹ್ಮಾವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಫೆ. 5 ರಂದು ಬುಧವಾರ ಬೆಳಿಗ್ಗೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪ ಕಾಡುರೂನಲ್ಲಿ ಸಂಭವಿಸಿದೆ.

ಮೃತಪಟ್ಟ ಮಹಿಳೆಯನ್ನು ಬೀಜಾಡಿಯ ಜಯಲಕ್ಷ್ಮೀ(68) ಎಂದು ಗುರುತಿಸಲಾಗಿದೆ.
ಗಂಭೀರ ಗಾಯಗೊಂಡ ರಾಮಚಂದ್ರ ಭಟ್, ಸುಜಾತಾ, ಮಂಗಳ, ಪ್ರೇಮಾ ಇವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಬ್ಬಿನಾಲೆ ಜಾತ್ರೆ ಮುಗಿಸಿ ಈ ಐವರು ಕಾರಿನಲ್ಲಿ ಬೆಳಿಗ್ಗೆ ಮಂದಾರ್ತಿ, ಸಾಲಿಗ್ರಾಮ, ಹಾಗೂ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆಂದು ಬರುತ್ತೀದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.