ಡೈಲಿ ವಾರ್ತೆ: 11/ಫೆ. /2025

ಎತ್ತಿನಬಂಡಿಗೆ ಬೈಕ್ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರು ಸ್ಥಳದಲ್ಲೇ ಮೃತ್ಯು

ಹಾವೇರಿ: ಎತ್ತಿನಬಂಡಿಗೆ ಬೈಕ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಎಂದು ಗುರುತಿಸಲಾಗಿದೆ.

ಈ ಮೂವರು ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್‌ನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ದರ್ಶನ್ ಹಾಗೂ ಆಕಾಶ್ ಮೂರನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಶಶಿಕುಮಾರ್ ಹನುಮನಮಟ್ಟಿ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ತಡರಾತ್ರಿ ಎತ್ತಿನಬಂಡಿಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.