ಡೈಲಿ ವಾರ್ತೆ: 17/ಫೆ. /2025

ಮೈಸೂರು| ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರ ಸಾವು

ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕುಶಾಲ್ ​(15), ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಮೃತ ದುರ್ದೈವಿಗಳು.

ಚೇತನ್​​​ ಮೊದಲಿಗೆ ತಾಯಿ ಪ್ರಿಯಂವಧಾ, ಪತ್ನಿ ರೂಪಾಲಿ ಮತ್ತು ಮಗ ಕುಶಾಲ್​ಗೆ ವಿಷವುಣಿಸಿ ಸಾಯಿಸಿರುವ ಶಂಕೆ ವ್ಯಕ್ತವಾಗಿದೆ. ಮೂವರಿಗೆ ವಿಷವುಣಿಸಿ ಸಾಯಿಸಿ ಬಳಿಕ ಚೇತನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.

ಸ್ಥಳಕ್ಕೆ ಮೈಸೂರು ಪೊಲೀಸ್ ಕಮಿಷನರ್​ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಇನ್ಸ್​ಪೆಕ್ಟರ್​ ಮೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.