ಡೈಲಿ ವಾರ್ತೆ: 05/ಮಾರ್ಚ್ /2025

ಬಿ.ಸಿ.ರೋಡ್| ಕಾರಿಗೆ ಖಾಸಗಿ ಬಸ್ ಡಿಕ್ಕಿ – ಚಾಲಕ ಗಂಭೀರಗಾಯ

ಬಂಟ್ವಾಳ : ಖಾಸಗಿ ಬಸ್ಸೊಂದು ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ಸರ್ಕಲ್ ಬಳಿ ಬುಧವಾರ ನಡೆದಿದೆ.

ಗಾಯಗೊಂಡ ಕಾರು ಚಾಲಕನನ್ನು ಕೇರಳ ಮೂಲದ ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಸೆಲಿನಾ ಬಸ್ ವಿರುದ್ದ ದಿಕ್ಕಿನಲ್ಲಿ ಬಂದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ನಿಯಮ ಮೀರಿದ ಚಾಲನೆಯೇ ಘಟನೆಗೆ ಕಾರಣ ಎಂದು ಹೇಳಲಾಗಿದೆ.

ಘಟನೆಯಿಂದ ಕಾರು‌ ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ‌ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ‌.