

ಡೈಲಿ ವಾರ್ತೆ: 09/ಮಾರ್ಚ್ /2025


ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ತೊಂದರೆಗಳು, ಇಲ್ಲಿದೆ ಮಾಹಿತಿ

ಋತುಗಳಿಗೆ ಅನುಗುಣವಾಗಿ ಸಿಗುವ ಬಹುತೇಕ ಹಣ್ಣುಗಳು ತಮ್ಮದೇ ಆದ ಆರೋಗ್ಯ ಪ್ರಯೋಜನಗಳನ್ನು ಹೊಂದಿರುತ್ತವೆ. ಹಾಗಾಗಿ ಅವು ಒದಗಿಸುವ ಪೋಷಕಾಂಶಗಳು ದೇಹಕ್ಕೆ ಬಹಳ ಮುಖ್ಯ. ಆದರೆ ಕೆಲವರು ತಿಳಿದೋ ತಿಳಿಯದೆಯೋ, ಹಣ್ಣುಗಳನ್ನು ಸೇವಿಸಿದ ನಂತರ ನೀರು ಕುಡಿಯುತ್ತಾರೆ. ಈ ರೀತಿಯ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದು ದೇಹಕ್ಕೆ ವಿವಿಧ ರೀತಿಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾದರೆ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ಯಾವ ರೀತಿಯ ತೊಂದರೆಯಾಗುತ್ತದೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳಿ.
ಋತುಗಳಿಗೆ ಅನುಗುಣವಾಗಿ ವಿವಿಧ ರೀತಿಯ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳುತ್ತವೆ. ಅದಕ್ಕೆ ಅನುಗುಣವಾಗಿ ದಿನನಿತ್ಯ ಕನಿಷ್ಠ ಒಂದು ರೀತಿಯ ಹಣ್ಣನ್ನಾದರೂ ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಸಾಮಾನ್ಯವಾಗಿ ಹಣ್ಣುಗಳು ವಿಟಮಿನ್ ಎ, ಬಿ, ಸಿ, ಇ, ಕ್ಯಾಲ್ಸಿಯಂ, ಕಬ್ಬಿಣದಿಂದ ಪೊಟ್ಯಾಸಿಯಮ್ ವರೆಗೆ, ದೇಹಕ್ಕೆ ಅಗತ್ಯವಿರುವ ಅನೇಕ ರೀತಿಯ ಪೋಷಕಾಂಶಗಳನ್ನು ಒದಗಿಸುತ್ತವೆ. ಅದಕ್ಕಾಗಿಯೇ ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಪ್ರತಿಯೊಬ್ಬರೂ ತಮ್ಮ ಆಹಾರದಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ಸೇರಿಸಿಕೊಳ್ಳುವುದಕ್ಕೆ ಸಲಹೆ ನೀಡಲಾಗುತ್ತದೆ. ಋತುಗಳಿಗೆ ಅನುಗುಣವಾಗಿ ಸಿಗುವ ಬಹುತೇಕ ಹಣ್ಣುಗಳು ತಮ್ಮದೇ ಆದ ಆರೋಗ್ಯ ಪ್ರಯೋಜನಗಳನ್ನು ಹೊಂದಿರುತ್ತವೆ. ಹಾಗಾಗಿ ಅವು ಒದಗಿಸುವ ಪೋಷಕಾಂಶಗಳು ದೇಹಕ್ಕೆ ಬಹಳ ಮುಖ್ಯ. ಆದರೆ ಕೆಲವರು ತಿಳಿದೋ ತಿಳಿಯದೆಯೋ, ಹಣ್ಣುಗಳನ್ನು ಸೇವಿಸಿದ ನಂತರ ನೀರು ಕುಡಿಯುತ್ತಾರೆ. ಈ ರೀತಿಯ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ. ಇದು ದೇಹಕ್ಕೆ ವಿವಿಧ ರೀತಿಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಹಾಗಾದರೆ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ಯಾವ ರೀತಿಯ ತೊಂದರೆಯಾಗುತ್ತದೆ ಎಂಬುದನ್ನು ವಿವರವಾಗಿ ತಿಳಿದುಕೊಳ್ಳಿ.
ಜೀರ್ಣಕಾರಿ ಸಮಸ್ಯೆಗಳು:
ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ನಿಧಾನವಾಗುತ್ತದೆ. ಇದರಿಂದ ಅಜೀರ್ಣತೆ, ಆಮ್ಲೀಯತೆ, ಹೊಟ್ಟೆಯುಬ್ಬರ ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಪರಿಣಾಮವಾಗಿ, ಹಣ್ಣುಗಳಿಂದ ಸರಿಯಾದ ರೀತಿಯಲ್ಲಿ ಪೋಷಕಾಂಶಗಳನ್ನು ಹೀರಿಕೊಳ್ಳಲು ದೇಹಕ್ಕೆ ಸಾಧ್ಯವಾಗುವುದಿಲ್ಲ. ಪೂರ್ಣ ಪ್ರಯೋಜನಗಳು ಸಿಗುವುದಿಲ್ಲ. ಹಣ್ಣು ತಿಂದ ತಕ್ಷಣ, ಅದರಲ್ಲಿಯೂ ವಿಶೇಷವಾಗಿ ಹುಳಿ ಹಣ್ಣುಗಳನ್ನು ಸೇವಿಸಿದ ನಂತರ ನೀರು ಕುಡಿಯುವುದು ಜೀರ್ಣಕ್ರಿಯೆಗೆ ಅಡ್ಡಿಯಾಗಬಹುದು.
ಪಿಎಚ್ (pH) ಮಟ್ಟಗಳಲ್ಲಿನ ಬದಲಾವಣೆಗಳು
ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ದೇಹದಲ್ಲಿ ನೀರಿನ ಪ್ರಮಾಣ ಹೆಚ್ಚಾಗುತ್ತದೆ. ಇದು ದೇಹದ ಪಿಎಚ್ ಮಟ್ಟದ ಕುಸಿತಕ್ಕೆ ಕಾರಣವಾಗುತ್ತದೆ. ಕೆಲವು ಹಣ್ಣುಗಳಲ್ಲಿ ನೀರಿನ ಪ್ರಮಾಣ ಜಾಸ್ತಿಯಾಗಿರುತ್ತದೆ. ಹಾಗಾಗಿ ನೀವು ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ನೀರಿನಾಂಶ ಜಾಸ್ತಿಯಾಗಿ ಕೆಲವರಿಗೆ ವಾಂತಿಯಾಗಬಹುದು.
ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಳ:
ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಜೊತೆಗೆ ದೇಹದಲ್ಲಿ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆ. ಇದು ಮಧುಮೇಹಕ್ಕೆ ಕಾರಣವಾಗಬಹುದು. ಹಾಗಾಗಿ ಮಧುಮೇಹಿಗಳು ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯಬಾರದು ಎಂಬುದನ್ನು ನೆನಪಿನಲ್ಲಿಡಬೇಕು.
ಶೀತ ಮತ್ತು ಕೆಮ್ಮಿನ ಸಮಸ್ಯೆಗಳು:
ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯುವುದರಿಂದ ದೇಹದಲ್ಲಿ ಕಫ ಹೆಚ್ಚಾಗುತ್ತದೆ. ಇದು ಕೆಮ್ಮು, ಶೀತ, ಗಂಟಲು ನೋವಿಗೆ ಕಾರಣವಾಗಬಹುದು. ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದರಿಂದ ಕೆಮ್ಮಿಗೆ ಕಾರಣವಾಗಬಹುದು ಎಂದು ಹಿರಿಯರು ಹೇಳುವುದನ್ನು ನೀವು ಆಗಾಗ ಕೇಳಿರಬಹುದು. ಈ ಹಣ್ಣುಗಳನ್ನು ಊಟಕ್ಕೆ ಅರ್ಧ ಗಂಟೆ ಮೊದಲು ಅಥವಾ ನಂತರ ತಿನ್ನಬೇಕು. ಆದರೆ ಅವುಗಳ ಸೇವನೆಯ ನಂತರ ನೀರನ್ನು ಮಾತ್ರ ಕುಡಿಯಬಾರದು.
Disclaimer : ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳ ಮಾಹಿತಿಯನ್ನು ಆಧರಿಸಿದೆ. ಡೈಲಿ ವಾರ್ತೆ ನ್ಯೂಸ್ ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ಇದಕ್ಕೆ ಜವಾಬ್ದಾರಿಯಲ್ಲ.