ಡೈಲಿ ವಾರ್ತೆ: 09/ಮಾರ್ಚ್ /2025

ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ ದಿಗಂತ್

ಬಂಟ್ವಾಳ| ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ ಮುಂದೆ ದಿಗಂತ್​ ಹೇಳಿದ್ದಾರೆ.

ದ್ಚಿತೀಯ ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಹೋಗಿರುವುದಾಗಿ ಪೊಲೀಸರಿಗೆ ದಿಗಂತ್​ ಹೇಳಿದ್ದಾರೆ. ಫೆಬ್ರವರಿ 25ರಂದು ನಾಪತ್ತೆಯಾಗಿದ್ದ ದಿಗಂತ್​ ಬರೊಬ್ಬರಿ 10 ದಿನಗಳ ಬಳಿಕ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ. ದಿಗಂತ್​ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ.

ಮನೆಬಿಟ್ಟ ಊರೂರು ಸುತ್ತಿದ್ದ ದಿಂಗತ್​:
ನಾಪತ್ತೆಯಾದ ದಿನ ಮನೆ ಬಳಿ ರೈಲ್ವೆ ಟ್ರ್ಯಾಕ್​ ಬಳಿ ಹೋಗಿದ್ದ ದಿಗಂತ್, ಅಲ್ಲಿ ಚಪ್ಪಲಿ ಬಿಚ್ಚಿಟ್ಟು ಶೂ ಹಾಕಿಕೊಂಡಿದ್ದಾನೆ. ಬಳಿಕ, ಅಪರಿಚಿತರ ಬೈಕ್​ಏರಿ ಮಂಗಳೂರಿಗೆ ಹೋಗಿದ್ದಾರೆ. ಮಂಗಳೂರಿನಿಂದ ಬಸ್​ ಶಿವಮೊಗ್ಗ ತಲುಪಿ, ಬಳಿಕ ಶಿವಮೊಗ್ಗದಿಂದ ಮೈಸೂರಿಗೆ ಹೋಗಿದ್ದಾನೆ. ಮೈಸೂರಿನಲ್ಲಿ ಟ್ರೈನ್​ ಹತ್ತಿ ಬೆಂಗಳೂರಿಗೆ ಹೋಗಿದ್ದಾನೆ . ನಂದಿಬೆಟ್ಟಕ್ಕೆ ತೆರಳಿ, ಅಲ್ಲಿಯ ಹೊಟೇಲ್​ ಒಂದರಲ್ಲಿ ಮೂರು ದಿನ ಕೆಲಸ ಮಾಡಿ 3000 ಸಂಪಾದನೆ ಮಾಡಿದ್ದಾನೆ

ನಂತರ ವಿವಿಧ ಕಡೆ ಸುತ್ತಾಟ ನಡೆಸಿ, ಶನಿವಾರ (ಮಾ.08) ರಂದು ಬೆಂಗಳೂರಿನಲ್ಲಿ ಮುರುಡೇಶ್ವರ ಎಕ್ಸ್‌ಪ್ರೆಸ್ ಟ್ರೈನ್​ ಹತ್ತಿ ಉಡುಪಿಗೆ ತುಲುಪಿದ್ದಾನೆ .

ಪೊಲೀಸರಿಗೆ ಪ್ರಶ್ನೆ ಕೇಳಿದ್ದ ದಿಗಂತ್​:
ಶನಿವಾರ ಬೆಂಗಳೂರಿನಿಂದ ಮುರುಡೇಶ್ವರ ಎಕ್ಸ್‌ಪ್ರೆಸ್‌ ಟ್ರೈನ್​ನಲ್ಲಿ ಹೋಗುವಾಗ ದಿಗಂತ್ ಪೊಲೀಸರ ಕಾರ್ಯಾಚರಣೆ ನೋಡಿದ್ದನು. ರೈಲು ದಿಗಂತ್ ಮನೆ ಸಮೀಪವೇ ಹೋಗುತ್ತೆ. ಮನೆ ಸಮೀಪ ರೈಲು ಬಂದಾಗ, ಕಿಟಕಿ ಬಳಿ ನಿಂತು ದಿಗಂತ್ ತನ್ನ ಮನೆ ಗಮನಿಸಿದ್ದನು. ಈ ವೇಳೆ, ರೈಲು ಹಳಿ ಸುತ್ತಾಮುತ್ತಾ ಡ್ರೋನ್ ಹಾರಾಟ, ಪೊಲೀಸರ ಕೂಂಬಿಂಗ್ ನೋಡಿದ್ದನು. ಪತ್ತೆಯಾದ ಬಳಿಕ‌ ಪೊಲೀಸರಿಗೆ, ಮನೆ ಬಳಿ ಇರುವ ಕೆರೆ ಹತ್ತಿರ ಏನಕ್ಕೆ ಅಗೆಯುತ್ತಿದ್ರಿ, ಹುಡುಕುತ್ತಿದ್ರಿ ಎಂದು ದಿಗಂತ್ ಪ್ರಶ್ನಿಸಿದ್ದಾನು.

ಹಲವು ಅನುಮಾನಕ್ಕೆ ಹುಟ್ಟು ಹಾಕಿದ್ದ ದಿಗಂತ್ ನಾಪತ್ತೆ:
ದಿಗಂತ್ ನಾಪತ್ತೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದವು. ದಿಗಂತ ನಾಪತ್ತೆ ಹಿಂದೆ ಗಾಂಜಾ ವ್ಯಸನಿಗಳ ಕೈವಾಡವಿದೆಯಾ? ಎಂಬ ಅನುಮಾನ ಹುಟ್ಟಿಕೊಂಡಿತ್ತು. ಇಷ್ಟೇ ಅಲ್ಲದೇ, ದಿಗಂತ್​ ಬಂಟ್ವಾಳ ತಾಲೂಕಿನ ಸಜಿಪ ಮೂಲದ ಮಂಗಳಮುಖಿಯ ಜೊತೆಗೆ ಹೋಗಿದ್ದಾನೆ ಎಂದು ವಂದತಿ ಹಬ್ಬಿತ್ತು. ಈ ಎಲ್ಲ ವಂದತಿಗಳಿಂದ ಪೋಷಕರು ಗಾಭರಿಗೊಂಡಿದ್ದರು.