ಡೈಲಿ ವಾರ್ತೆ: 15/ಮಾರ್ಚ್ /2025

ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ: ಇಬ್ಬರು ಗಂಭೀರ ಗಾಯ, ಕಾರು ಅಪ್ಪಚ್ಚಿ..!

ಬೆಳಗಾವಿ: ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ಮಾದರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದ ಘಟನೆ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಾರಿನೊಳಗೆ ಸಿಲುಕಿ ಒದ್ದಾಡುತ್ತಿದ್ದ ಇಬ್ಬರನ್ನು ಎರಡು ಕ್ರೇನ್ ಮೂಲಕ ರಕ್ಷಣೆ ಮಾಡಲಾಗಿದೆ. ಇನ್ನು ಕಾರಿನ ಸ್ಥಿತಿ ನೋಡಿದ್ರೆ ನಿಜಕ್ಕೂ ಭಯಾನಕವಾಗಿದೆ.

ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಸಿಲುಕಿಕೊಂಡದ್ದ
ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಇಬ್ಬರು
ನರಳಾಡುತ್ತಿದ್ದರು. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.