ಡೈಲಿ ವಾರ್ತೆ: 21/ಮಾರ್ಚ್ /2025

ಉಡುಪಿ: ಟಿಪ್ಪರ್ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದ ಕಾರು – ಪ್ರಯಾಣಿಕರು ಪವಾಡಸದೃಶದಿಂದ ಪಾರು!

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯ ರಾಷ್ಟ್ರೀಯ ಹೆದ್ದಾರಿ 66ರ ನಿಟ್ಟೂರು ಪೆಟ್ರೋಲ್ ಪಂಪ್ ನ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಸಂತೆಕಟ್ಟೆಯ ಖಾಸಗಿ ಸೊಸೈಟಿಯ ಸಿಬ್ಬಂದಿ ಮೂವರು ಕಾರಿನಲ್ಲಿ ಉಡುಪಿಯಿಂದ ಸಂತೆಕಟ್ಟೆ ಶಾಖೆಗೆ ತೆರಳುತ್ತಿದ್ದ ವೇಳೆ ಟಿಪ್ಪರ್ ನ್ನು ಚಾಲಕ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಕಾರಿಗೆ ನೇರ ಡಿಕ್ಕಿ ಹೊಡೆದಿರುತ್ತಾನೆ.
ಡಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕಂದಕಕ್ಕೆ ಉರುಳಿ ಬಿದಿದ್ದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಈ ಅಪಘಾತಕ್ಕೆ ಟಿಪ್ಪರ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷವೇ ಕಾರಣ ಎಂದು ತಿಳಿದು ಬಂದಿದೆ.
ಉಡುಪಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.