


ಡೈಲಿ ವಾರ್ತೆ: 21/ಮಾರ್ಚ್ /2025


ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ — ವೈದ್ಯಕೀಯ ನೆರವು ಹಸ್ತಾಂತರ

ಕೋಟ| ಶ್ರೀಮತಿ ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ಮುಖೇನ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ಸಾಲಿಗ್ರಾಮ ಪಾರಂಪಳ್ಳಿ ನಿವಾಸಿ ಶಿವಾನಂದ ಉಪಾಧ್ಯಾಯ ಇವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವನ್ನು ಇತ್ತೀಚೆಗೆ ಪಾರಂಪಳ್ಳಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.
ಟ್ರಸ್ಟಿ ಗಳಾದ ಪಿ. ಸದಾಶಿವ ಮಧ್ಯಸ್ಥ, ಪಿ.ಲಕ್ಷ್ಮೀ ನಾರಾಯಣ ಮಧ್ಯಸ್ಥ, ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಯಂ ಶಿವರಾಮ ಉಡುಪ, ಉಪಾಧ್ಯಕ್ಷರಾದ ಪಟ್ಟಾಭಿರಾಮ ಸೋಮಯಾಜಿ, ಸುಬ್ರಾಯ ಉರಾಳ ಮತ್ತಿತರರು ಉಪಸ್ಥಿತರಿದ್ದರು.
ಸಭಾದ ಕಾರ್ಯದರ್ಶಿ ಕೆ ರಾಜಾರಾಮ ಐತಾಳ ಕಾರ್ಯಕ್ರಮ ನಿರ್ವಹಿಸಿದರು.