ಡೈಲಿ ವಾರ್ತೆ: 01/ಏಪ್ರಿಲ್ /2025

ಬ್ರಹ್ಮಾವರ| ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿ ಮೃತ್ಯು

ಬ್ರಹ್ಮಾವರ: ಶಾಲೆಗೆಂದು ತೆರಳುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಎಸ್ಎಂಎಸ್ ಬಳಿ ಏಪ್ರಿಲ್ 1 ರಂದು ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮೃತ ಬಾಲಕ ಸ್ಥಳೀಯ ಎಸ್ಎಂಎಸ್ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ಬಾಲಕ ವಂಶಿ ಜಿ ಶೆಟ್ಟಿ(14) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ ಬಾಲಕ ವಂಶಿ ಜಿ ಶೆಟ್ಟಿ ಶಾಲೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ ಕುಂದಾಪುರ ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಸಾವನಪ್ಪಿದ್ದಾನೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸ್ಥಳ ಅಪಘಾತ ವಲಯವಾಗಿದ್ದು, ಈ ಹಿಂದೆ ಹಲವು ಮಾರಣಾಂತಿಕ ಅಪಘಾತಗಳು ಸಂಭವಿಸಿವೆ. ಈ ಜಂಕ್ಷನ್‌ನಲ್ಲಿ ಸುರಕ್ಷತೆಗಾಗಿ ಶಾಶ್ವತ ಪರಿಹಾರವನ್ನು ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.