



ಡೈಲಿ ವಾರ್ತೆ: 21/ಏಪ್ರಿಲ್/2025


ಕಾರು ಹಾಗೂ KSRTC ಬಸ್ ನಡುವೆ ಭೀಕರ ಅಪಘಾತ, ಚಾಲಕ ಸ್ಥಳದಲ್ಲೇ ಸಾವು

ಅಥಣಿ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಭೀಕರ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೇವರ್ಗಿ -ಸಂಕೇಶ್ವರ ರಾಜ್ಯ ಹೆದ್ದಾರಿಯಲ್ಲಿ ದೇಸಾರಟ್ಟಿ ಗ್ರಾಮದ ಬಳಿ ಸಂಭವಿಸಿದೆ.
ಮೃತಪಟ್ಟ ಕಾರು ಚಾಲಕನನ್ನು ವಿಜಯಪುರ ಮೂಲದ ಯಾಸೀನ್ ಇನಾಮ್ದಾರ್ (47) ಎಂದು ಗುರುತಿಸಲಾಗಿದೆ.
ವಿಜಯಪುರದಿಂದ ಅಥಣಿ ಕಡೆ ತೆರಳುತ್ತಿದ್ದ ಕಾರಿಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಭೀಕರ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.