ಡೈಲಿ ವಾರ್ತೆ: 07/MAY/2025

ಕಾಂತಾರಾ-1 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು

ಕುಂದಾಪುರ: ಬಹುನಿರೀಕ್ಷಿತ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು. ಈ ಸಿನಿಮಾ ಸೆಟ್​ನಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್​ ಕೇರಳ ಮೂಲದ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ
ಉಡುಪಿ ಜಿಲ್ಲೆಯ ಬೈಂದೂರಿನ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.ಇದರಿಂದ ಸಿನಿಮಾ ತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ.

ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.