



ಡೈಲಿ ವಾರ್ತೆ: 09/MAY/2025


ಶಿವಮೊಗ್ಗ| ಬೆಳ್ಳಂಬೆಳಗ್ಗೆ ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯ ಹತ್ಯೆ

ಶಿವಮೊಗ್ಗ: ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಹೇಮಣ್ಣ(68) ಎಂದು ಗುರುತಿಸಲಾಗಿದೆ.
ಹೇಮಣ್ಣರ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.