



ಡೈಲಿ ವಾರ್ತೆ: 10/MAY/2025


ಪಾಕಿಸ್ತಾನ ಶೆಲ್ ದಾಳಿಯಿಂದ ಭಾರತದ ಹಿರಿಯ ಅಧಿಕಾರಿ ಸಾವು, ಇಬ್ಬರಿಗೆ ಗಾಯ.!

ಜಮ್ಮು: ಶನಿವಾರ ಮುಂಜಾನೆ ರಾಜೌರಿ ಪಟ್ಟಣದ ಮೇಲೆ ಅಪ್ಪಳಿಸಿದ ಪಾಕಿಸ್ತಾನಿ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅವರ ಇಬ್ಬರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ರಾಜೌರಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪ್ಪಾ ಪಾಕ್ ಶೆಲ್ ದಾಳಿಗೆ ಮೃತಪಟ್ಟ ಹಿರಿಯ ನಾಗರಿಕ ಸೇವಕರಾಗಿದ್ದಾರೆ.
ರಾಜೌರಿ ಹೆಚ್ಚುವರಿ ಜಿಲ್ಲಾಧಿಕಾರಿ ಹತ್ಯೆಯ ಬಗ್ಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದೃಢಪಡಿಸಿದ್ದಾರೆ. ಅವರು X ಖಾತೆಯಲ್ಲಿ, “ರಾಜೌರಿಯಿಂದ ವಿನಾಶಕಾರಿ ಸುದ್ದಿ. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್ಲೈನ್ ಸಭೆಯಲ್ಲಿ ಭಾಗವಹಿಸಿದ್ದರು’ ಎಂದು ಹೇಳಿದರು.
ರಾಜೌರಿ ಪಟ್ಟಣವನ್ನು ಗುರಿಯಾಗಿಸಿಕೊಂಡು ಪಾಕ್ ಶೆಲ್ ದಾಳಿ ನಡೆಸಿದೆ. ಪರಿಣಾಮ ನಮ್ಮ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ರಾಜ್ ಕುಮಾರ್ ಥಾಪ್ಪಾ ಸಾವನ್ನಪ್ಪಿದ್ದಾರೆ. ಈ ಭೀಕರ ಜೀವಹಾನಿಗೆ ನನ್ನ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಲು ನನಗೆ ಪದಗಳಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಒಮರ್ ಅಬ್ದುಲ್ಲಾ ತಿಳಿಸಿದ್ದಾರೆ.