ಡೈಲಿ ವಾರ್ತೆ: 16/MAY/2025

ಹೊಸನಗರ| ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಲಾರಿ – ಚಾಲಕ ಅದೃಷ್ಟವಶಾತ್ ಪಾರು

ಹೊಸನಗರ: ಟೆನ್ ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನದಿಯಲ್ಲಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ ಮುಳುಗಿದ ಘಟನೆ ಶುಕ್ರವಾರ ರಾತ್ರಿ ಹುಲಿಕಲ್ ಹೆದ್ದಾರಿ ಬಳಿ ಸಂಭವಿಸಿದೆ.

ತೀರ್ಥಹಳ್ಳಿ ಮಾಸ್ತಿಕಟ್ಟೆ ಮಾರ್ಗವಾಗಿ ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ನದಿಗೆ ಬಿದ್ದಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.