



ಡೈಲಿ ವಾರ್ತೆ: 28/MAY/2025


ಮುಸ್ಲಿಂ ಯುವಕನ ಹತ್ಯೆಗೆ ಪೋಲಿಸ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ : ಎಸ್.ಡಿ.ಟಿ.ಯು

ಮಂಗಳೂರು : ರೌಡಿ ಶೀಟರ್ ಸುಹಾಸ್ ಶೆಟ್ಟಿಯ ಹತ್ಯೆಯ ನಂತರ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಮಾಯಕ ಮುಸಲ್ಮಾನರ ಮೇಲೆ ಸಂಘ ಪಾರಿವಾರದ ಗೂಂಡಗಳು ದಾಳಿ ಮಾಡಿದ್ದು ಅಲ್ಲದೆ ಸಂಘಪರಿವಾರದ ನಾಯಕರು ಸುಹಾಸ್ ಶೆಟ್ಟಿಯ ಹತ್ಯೆಗೆ ಪ್ರತಿಕಾರವಾಗಿ ಕೊಲೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವಾಗ ಇಲ್ಲಿನ ಪೋಲಿಸ್ ಇಲಾಖೆ ಅವರ ವಿರುದ್ದ ಯಾವುದೇ ರೀತಿಯ ಕಾನೂನು ಕ್ರಮ ಜರಗಿಸದ ಕಾರಣವೇ ಅಮಾಯಕ ಮುಸ್ಲಿಂ ಯುವಕನ ಬರ್ಬರವಾಗಿ ಕೊಲೆ ನಡೆದಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಿಮಾನ್ ಬೋಳಿಯಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಪ್ರಕಟಿಸಿದ ಅವರು ಅಮಾಯಕ ಮುಸ್ಲಿಂ ಯುವಕನ ಹತ್ಯೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಮಂಗಳೂರು ನಗರ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತಿದೆ ಹಾಗೂ ಅಮಾಯಕ ಮುಸ್ಲಿಂ ಯುವಕ ಹತ್ಯೆಯ ಹಿಂದೆ ಇರುವ ಎಲ್ಲಾ ಸಂಘಪರಿವಾರದ ನಾಯಕರನ್ನು ಕೂಡಲೇ ಬಂಧಿಸಿ ಜಿಲ್ಲೆಯಲ್ಲಿ ಶಾಂತಿ ಕಾಪಡಬೇಕೆಂದು ರಾಜ್ಯ ಸರಕಾರದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಿಮಾನ್ ಬೋಳಿಯಾರ್ ಆಗ್ರಹಿಸಿದ್ದಾರೆ.