ಡೈಲಿ ವಾರ್ತೆ: 01/JUNE/2025

ಕುಂದಾಪುರ: ಅಕ್ರಮ ಮರಳುಗಾರಿಕೆ – ಓರ್ವನ ಬಂಧನ, ಇನ್ನೊರ್ವ ಪರಾರಿ!

ಕುಂದಾಪುರ: ವಡೇರಹೋಬಳಿ ಗ್ರಾಮದ ನಾನಾ ಸಾಹೇಬ್ ರಸ್ತೆಯ ರಿಂಗ್ ರೋಡ್ ಸಮೀಪದ ಪಂಚಗಂಗಾವಳಿ ಹೊಳೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ಕುಂದಾಪುರ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿ ಮತ್ತೋರ್ವ ಆರೋಪಿ ಪರಾರಿಯಾಗಿರುವ ಬಗ್ಗೆ ಜೂ. 1 ರಂದು ವರದಿಯಾಗಿದೆ.

ಹೊಳೆಯಲ್ಲಿ ಕೆಲವು ಜನರು ಮರಳನ್ನು ತೆಗೆದು ದೋಣಿಯಲ್ಲಿ ತುಂಬಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಕುಂದಾಪುರ ಪೊಲೀಸ್ ನಿರೀಕ್ಷಕ ನಂಜಾ ನಾಯ್ಕ್ ಸ್ಥಳಕ್ಕೆ ದಾಳಿ ನಡೆಸಿ, ಉದಯ ಮೆಂಡನ್ ಎಂಬಾತನನ್ನು ವಶಕ್ಕೆ ಪಡೆದಿದ್ದು ಇನ್ನೋರ್ವ ಆರೋಪಿ ಸುನಿಲ್ ಎಂಬಾತನು ಓಡಿ ಹೋಗಿ ಪರಾರಿಯಾಗಿದ್ದಾನೆ.

ಆರೋಪಿತರು ಸಂಘಟಿತರಾಗಿ ಯಾವುದೇ ಪರವಾನಿಗೆ ಇಲ್ಲದೇ ಪಂಚಗಂಗಾವಳಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸಾಗಾಟ ಮಾಡಲು ಶೇಖರಿಸಿರುವುದು ಕಂಡುಬಂದಿದ್ದು, ಸ್ಥಳದಲ್ಲಿದ್ದ ಕೃತ್ಯಕ್ಕೆ ಬಳಸಿದ್ದ ಫೈಬರ್ ದೋಣಿ, ಮರಳು, ಟಿಪ್ಪರ್ ವಾಹನ ಸೇರಿದಂತೆ ಒಟ್ಟು 5,20,000ರೂ. ವೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.