



ಡೈಲಿ ವಾರ್ತೆ: 03/JUNE/2025


ಪೊಲೀಸ್ ಠಾಣೆಗೆ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿ!

ಚಾಮರಾಜನಗರ: ಪಟ್ಟಣ ಪೊಲೀಸ್ ಠಾಣೆಗೆ ತನ್ನ
ವಿರುದ್ಧ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಗಂಡ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಮಂಗಳವಾರ (ಜೂ.03) ನಡೆದಿದೆ.
ನಗರದ ಸೋಮವಾರಪೇಟೆ ಗಿರೀಶ್ ತನ್ನ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದಾನೆ.
ಆರು ತಿಂಗಳ ಹಿಂದೆ ಗಂಡ-ಹೆಂಡತಿಯ ನಡುವೆ ಕಲಹ ಉಂಟಾಗಿದ್ದು, ಠಾಣೆಯ ಮೆಟ್ಟಿಲೇರಿ ವಿದ್ಯಾಳನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಇಂದು ಗಂಡನ ಕುಟುಂಬದ ವಿರುದ್ಧ ಠಾಣೆಗೆ ದೂರು ನೀಡಲು ಬರುತ್ತಿದ್ದ ಪತ್ನಿಯನ್ನು ಪತಿ ಕೊಡಲಿ ಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಸಿಮ್ಸ್ ಆಸ್ಪತ್ರೆಯಲ್ಲಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದೆ.