ಡೈಲಿ ವಾರ್ತೆ: 04/JUNE/2025

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

ಬೆಂಗಳೂರು: ಆರ್‌ಸಿಬಿಯ ಬೆಂಗಳೂರಿನ ಅಭಿಮಾನಿಗಳಿಗೆ ಸಿಹಿ ಸುದ್ದಿ. 18 ವರ್ಷಗಳ ಕನಸು ನನಸಾದ ಬೆನ್ನಲ್ಲೇ ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿಯ ವಿಕ್ಟರಿ ಪರೇಡ್‌ ನಡೆಯಲಿದೆ.

ಅಧಿಕೃತವಾಗಿ ಆರ್‌ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ.

ಫೈನಲ್‌ ಪಂದ್ಯ ಗೆದ್ದ ಬಳಿಕ ವಿರಾಟ್‌ ಕೊಹ್ಲಿ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್‌ ನಡೆಸಲಾಗುವುದು ಎಂದು ತಿಳಿಸಿದ್ದರು.
ಅಭಿಮಾನಿಗಳನ್ನು 12ನೇ ಸೇನೆ ಎಂದೇ ಆರ್‌ಸಿಬಿ ಕರೆಯುತ್ತಿದೆ. ಈ ಕಿರೀಟ ನಿಮಗೆ ಸೇರಿದ್ದು ಎಂದು ಹೇಳಿದೆ.