



ಡೈಲಿ ವಾರ್ತೆ: 04/JUNE/2025


ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ RCB ಅಭಿಮಾನಿಗೆ ಚಾಕು ಇರಿತ!

ಬೆಂಗಳೂರು: ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಕಪ್ ತನ್ನದಾಗಿಸಿಕೊಂಡ ಹಿನ್ನೆಲೆ ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್ಸಿಬಿ ಅಭಿಮಾನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಜಾಲಹಳ್ಳಿ ಕ್ರಾಸ್ ಬಳಿ ನಡೆದಿದೆ.
ಆರ್ಸಿಬಿ ಐಪಿಎಲ್ ಫೈನಲ್ ಪಂದ್ಯಾವಳಿಯಲ್ಲಿ ಜಯಭೇರಿಯಾದ ಹಿನ್ನೆಲೆ ಯುವಕ ಸಂಭ್ರಮಾಚರಣೆ ಮಾಡುತ್ತಾ ಬಾರ್ಗೆ ತೆರಳುವ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಯುವಕನ ಕುತ್ತಿಗೆಯ ಭಾಗಕ್ಕೆ ಇರಿದು ಎಸ್ಕೇಪ್ ಆಗಿದ್ದಾರೆ. ತಡರಾತ್ರಿ 12 ಗಂಟೆ ವೇಳೆಗೆ ಘಟನೆ ನಡೆದಿದೆ.
ಅದೃಷ್ಟವಶಾತ್ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾನೆ. ಪ್ರತಿರೋಧ ಬಳಿಕ ದುಷ್ಕರ್ಮಿಗಳ ಗ್ಯಾಂಗ್ ಘಟನಾ ಸ್ಥಳದಿಂದ ಕಾಲ್ಕಿತ್ತಿದೆ. ಸ್ಥಳೀಯರ ಸಹಾಯದಿಂದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.