



ಡೈಲಿ ವಾರ್ತೆ: 04/JUNE/2025


ಬಂಟ್ವಾಳ: ಹಾವು ಕಡಿದು ನವ ವಿವಾಹಿತ ಸಾವು!

ಬಂಟ್ವಾಳ : ಹಾವು ಕಡಿದು ನವ ವಿವಾಹಿತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಪಾಂಡವರಕಲ್ಲು ಎಂಬಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆದಿರುವ ಬಗ್ಗೆ ವರದಿಯಾಗಿದೆ.
ಮೃತನನ್ನು ಸ್ಥಳೀಯ ನಿವಾಸಿ, ಅಶ್ರಫ್ ಪಾದೆ (29) ಎಂದು ಗುರುತಿಸಲಾಗಿದೆ.
ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ವೇಳೆ ಗೋಣಿ ಚೀಲದಲ್ಲಿ ಬದಿಯಲ್ಲಿದ್ದ ನಾಗರಹಾವು ಕಚ್ಚಿದ್ದು, ತಕ್ಷಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಆರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಹೆಚ್ಚಿನ ವಿವರಗಳು ತಿಳಿದು ಬಂದಿಲ್ಲ.