



ಡೈಲಿ ವಾರ್ತೆ: 05/JUNE/2025


ಶಿವಮೊಗ್ಗ| ಕಾರು, ಬಸ್ ನಡುವೆ ಭೀಕರ ಅಪಘಾತ – ಓರ್ವ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಬಸ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿರುವ ಘಟನೆ ನಗರದ ಎಲ್ಎಲ್ಆರ್ ರಸ್ತೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರ ಕರೆದುಕೊಂಡು ಬರುತ್ತಿದ್ದ ಖಾಸಗಿ ಬಸ್ ನಗರದ ಎಲ್ಎಲ್ಆರ್ ರಸ್ತೆಗೆ ಬಂದಾಗ ಕಾರಿಗೆ ಡಿಕ್ಕಿ ಹೊಡಿದಿದೆ. ಢಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಪ್ರದೀಪ್ ಎಂಬಾತ ಮೃತಪಟ್ಟಿದ್ದಾನೆ. ಬಸ್ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು ಎಲ್ಲರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಿರಿದಾದ ರಸ್ತೆಯಲ್ಲಿ ಬಸ್ ಚಾಲಕನ ಅತಿವೇಗದ, ಅಜಾಗರೂಕತೆಯ ಚಾಲನೇಯೇ ಘಟನೆಗೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.