



ಡೈಲಿ ವಾರ್ತೆ: 07/JUNE/2025


ಸಾಲಿಗ್ರಾಮ| ಬೈಕ್ ಗೆ ಖಾಸಗಿ ಬಸ್ ಡಿಕ್ಕಿ – ಬೈಕ್ ಸವಾರ ಗಂಭೀರ ಗಾಯ

ಕೋಟ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಜೂ. 7 ರಂದು ಶನಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನ ಸರ್ಕಲ್ ನಲ್ಲಿ ಸಂಭವಿಸಿದೆ.

ಗಾಯಗೊಂಡ ಬೈಕ್ ಸವಾರ ಬಾರ್ಕೂರಿನ ಹೊಸಾಳ ಗ್ರಾಮದ ಸುಧಾಕರ ಮೊಗವೀರ ಎಂದು ಗುರುತಿಸಲಾಗಿದೆ. ಇವರು ಕಟ್ಟಡ ಕಾರ್ಮಿಕರು ಎಂದು ತಿಳಿದು ಬಂದಿದೆ.
ಬೈಕ್ ಸವಾರ ಗುರುನರಸಿಂಹ ದೇವಸ್ಥಾನದಿಂದ ಆಂಜನೇಯ ದೇವಸ್ಥಾನಕ್ಕೆ ಬರುತ್ತಿದ್ದ ವೇಳೆ
ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದ ಖಾಸಗಿ ಬಸ್ ನೇರ ಡಿಕ್ಕಿ ಹೊಡೆದಿದೆ.ಸ್ಥಳೀಯರು ಟೋಲ್ ಅಂಬುಲೆನ್ಸ್ ಮೂಲಕ ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ಗಾಯಳನ್ನು ಕಳುಹಿಸಿದರು. ಕೋಟ ಠಾಣೆ ಅಪರಾಧ ಪತ್ತೆ ವಿಭಾಗದ ಇನ್ಸ್ಪೆಕ್ಟರ್ ಸುಧಾ ಪ್ರಭು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.