ಡೈಲಿ ವಾರ್ತೆ: 10/JUNE/2025

ಉಡುಪಿ| ಇಂದ್ರಾಳಿ ರೈಲ್ವೆ ನಿಲ್ದಾಣ ಸಮೀಪ ಯುವಕನೋರ್ವ ಆತ್ಮಹತ್ಯೆಗೆ ಯತ್ನ!

ಉಡುಪಿ: ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ಮಂಗಳವಾರ ನಸುಕಿನ ಜಾವ ನಡೆದಿದೆ.

ದಾಖಲಿಸಲ್ಪಟ್ಟಿರುವ ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ‌ ಹೆಸರು ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

ಯುವಕ ಅರೆಬೆತ್ತಲೆ ಸ್ಥಿತಿಯಲ್ಲಿದ್ದು, ಸೊಂಟದ ಪಟ್ಟಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ, ಸಾರ್ವಜನಿಕರು ಆತ್ಮಹತ್ಯೆ ಯತ್ನವನ್ನು ವಿಫಲಗೊಳಿಸಿದ್ದಾರೆ.‌ ಯುವಕನ ಬಾಯಿ ಮೂಗಿನಿಂದ‌ ಸ್ವಲ್ಪ ಪ್ರಮಾಣದಲ್ಲಿ ರಕ್ತದ ಸೊರಿಕೆಯಾಗಿರುವುದು ಕಂಡುಬಂದಿದೆ. ಯುವಕ ಮಾದಕದ್ರವ್ಯ ವ್ಯಸನ ಮಾಡಿರುವ ಶಂಕೆ ವ್ಯಕ್ತವಾಗಿದೆ.