



ಡೈಲಿ ವಾರ್ತೆ: 13/JUNE/2025


ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಪುಕೆಟ್ ನಲ್ಲಿ ತುರ್ತು ಲ್ಯಾಂಡಿಂಗ್

ಮುಂಬೈ: ಥಾಯ್ಲೆಂಡ್ನ ಪುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಎಚ್ಚರಿಕೆ ಎದುರಾಗಿದ್ದು, ಪುಕೆಟ್ಗೆ ಹಿಂದಿರುಗಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ವಿಮಾನಯಾನ ಅಧಿಕಾರಿಗಳು ತಿಳಿಸಿದ್ದಾರೆ.
ಪುಕೆಟ್ ನಿಲ್ದಾಣದಲ್ಲಿ ಸುರಕ್ಷಿತವಾಗಿ ವಿಮಾನ ಇಳಿದಿದ್ದು, ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
AI 379 ವಿಮಾನವು ಹಾರಾಟದಲ್ಲಿರುವಾಗಲೇ ಈ ಎಚ್ಚರಿಕೆ ಪಡೆದಿದೆ. ಸ್ಥಳೀಯ ಕಾಲಮಾನದ ಪ್ರಕಾರ, ಬೆಳಗ್ಗೆ 9.30ಕ್ಕೆ ವಿಮಾನ ಹೊರಟಿದ್ದು, ಮಧ್ಯಾಹ್ನ 12.40ಕ್ಕೆ ದೆಹಲಿಗೆ ಬಂದಿಳಿಯಬೇಕಿತ್ತು.
ವಿಮಾನ ತುರ್ತು ಭೂ ಸ್ಪರ್ಶ ಮಾಡುತ್ತಿದ್ದಂತೆ ಎಲ್ಲಾ ಪ್ರಯಾಣಿಕರನ್ನು ಅವರ ಸಾಮಗ್ರಿಯೊಂದಿಗೆ ಕೆಳಗಿಳಿಸಲಾಗಿದೆ. ಭದ್ರತಾ ಸಂಸ್ಥೆಗಳು ಪ್ರಯಾಣಿಕರು ಮತ್ತು ಸರಕುಗಳನ್ನು ಸ್ಕ್ಯಾನ್ ಮಾಡಿದ್ದಾರೆ.