



ಡೈಲಿ ವಾರ್ತೆ: 14/JUNE/2025


ಉಡುಪಿ: ಜೂನ್ 15ರಂದು ನೇತ್ರದಾನ – ನೇತ್ರದಾನ ಜಾಗೃತಿ ಶಿಬಿರ

ಉಡುಪಿ: ಕಾಂಗ್ರೆಸ್ ಮುಖಂಡ, ಉದ್ಯಮಿ ಪ್ರಸಾದ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಇದೇ ಜೂನ್ 15ರಂದು ಬೆಳಿಗ್ಗೆ 9ರಿಂದ 1ಗಂಟೆಯವರೆಗೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ‘ನೇತ್ರದಾನ ಹಾಗೂ ನೇತ್ರದಾನ ಜಾಗೃತಿ ಶಿಬಿರ’ವನ್ನು ಆಯೋಜಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದೇಶ್ ಶೆಟ್ಟಿ ಅವರು, ನೇತ್ರದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಮತ್ತು ತಮ್ಮ ಕಣ್ಣುಗಳನ್ನು ದಾನ ಮಾಡಲು ಇಚ್ಛಿಸುವವರಿಗೆ ಅನುಕೂಲ ಮಾಡಿಕೊಡುವುದು ಈ ಶಿಬಿರದ ಮುಖ್ಯ ಉದ್ದೇಶ ಎಂದರು.
ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಹಯೋಗದೊಂದಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಭವನದ ಜೊತೆಗೆ ಏಕಕಾಲದಲ್ಲಿ ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್ ಹತ್ತಿರ ಕ್ಲಾಕ್ ಟವರ್ ಎದುರು, ಮಣಿಪಾಲದ ಕೆನರಾ ಮಾಲ್ ಹತ್ತಿರ ಹಾಗೂ ಬ್ರಹ್ಮಾವರ ಬಸ್ ಸ್ಟ್ಯಾಂಡ್ ಹತ್ತಿರ ಶಿಬಿರ ನಡೆಯಲಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಅವರು ವಿನಿಂತಿಸಿದರು.
ಸುದ್ದಿಗೋಷ್ಠಿಯಲ್ಲಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸಜ್ಜನ್ ಶೆಟ್ಟಿ, ಎನ್ಎಸ್ ಯುಐ ಉಪಾಧ್ಯಕ್ಷ ಶರತ್ ಕುಂದರ್ ಉಪಸ್ಥಿತರಿದ್ದರು.