



ಡೈಲಿ ವಾರ್ತೆ: 18/JUNE/2025


ಬ್ರಹ್ಮಾವರ| ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ- ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರು!

ಬ್ರಹ್ಮಾವರ: ಶಾಲಾ ಬಸ್ಸಿಗೆ ಹಿಂಬದಿಯಿಂದ ಈಚಾರ್ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಜೂ. 18 ರಂದು ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಸರ್ಕಲ್ ಬಳಿ ಸಂಭವಿಸಿದೆ.

G. M. ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವ ಸಂದರ್ಭ ಹಿಂದಿನಿಂದ ಬಂದ ಈಚಾರ್ ಲಾರಿಯೊಂದು ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಹಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿ ಗಳನ್ನು ತಕ್ಷಣ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತಕ್ಕೆ ಶಾಲಾ ಬಸ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ತಿಳಿದುಬಂದಿದೆ.
ಬ್ರಹ್ಮಾವರ ಠಾಣಾ ಪೊಲೀಸ್ ಸ್ಥಳಕ್ಕಾಗಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.