



ಡೈಲಿ ವಾರ್ತೆ: 20/JUNE/2025


ಕುಂದಾಪುರ| ಪತ್ನಿಯ ಮೊಬೈಲ್ ಚಟಕ್ಕೆ ಕುಪಿತಗೊಂಡ ಪತಿ – ಕತ್ತಿ ಯಿಂದ ಕಡಿದು ಭೀಕರ ಕೊಲೆ!

ಕುಂದಾಪುರ: ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ಪತಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಜೂ.19ರ ಗುರುವಾರ ರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ರೇಖಾ (26) ಎಂದು ಗುರುತಿಸಲಾಗಿದೆ.
ಆಕೆ ಪತಿ ಗಣೇಶ್ ಪೂಜಾರಿ ಕೊಲೆ ಮಾಡಿದ ಆರೋಪಿ.
ಆರೋಪಿ ಗಣೇಶ್ ಪೂಜಾರಿ ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದು ವಿಪರೀತ ಮಧ್ಯ ವ್ಯಸನ ಚಟವುಳ್ಳವನಾಗಿದ್ದ.
ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ವಿಪರೀತ ಮಧ್ಯ ಸೇವನೆ ಮಾಡಿ ಗುರುವಾರ ತಡರಾತ್ರಿ ರಾತ್ರಿ ಮನೆಯಲ್ಲಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಗಣೇಶ್ ಪೂಜಾರಿಯನ್ನು ಬಂಧಿಸಿಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿದೆ.