ಡೈಲಿ ವಾರ್ತೆ: 21/JUNE/2025

ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು!

ಹೊಸನಗರ: ಜಾನುವಾರು ಅಡ್ಡ ಬಂದ ಪರಿಣಾಮ ಉಡುಪಿ ಜಿಲ್ಲೆಯ ಬೈಂದೂರು ಬಿಜೆಪಿ ಶಾಸಕ ಗುರುರಾಜ್‌ ಗಂಟಿಹೊಳೆ ಪ್ರಯಾಣಿಸುತ್ತಿದ್ದ ಕಾರು ಸೇರಿ ಮೂರು ಕಾರು ಸರಣಿ ಅಪಘಾತವಾದ ಘಟನೆ ಹೊಸನಗರ ತಾಲೂಕು ವ್ಯಾಪ್ತಿಯ ರಿಪ್ಪನ್‌ಪೇಟೆ ಸಮೀಪದಲ್ಲಿರುವ ಕೋಡೂರಿನಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರಿನಿಂದ ಬೈಂದೂರಿಗೆ ಬರುತ್ತಿದ್ದ ವೇಳೆ ಕಾರಿಗೆ ಜಾನುವಾರು ಅಡ್ಡ ಬಂದ ಪರಿಣಾಮ ಶಾಸಕರ ಕಾರು ಸೇರಿ ಮೂರು ಕಾರು ಸರಣಿ ಅಪಘಾತ ಗೊಂಡಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಅಪಘಾತದಲ್ಲಿ ಕಾರು ಜಖಂಗೊಂಡಿದೆ.

ರಿಪ್ಪನ್ ಪೇಟೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.