



ಡೈಲಿ ವಾರ್ತೆ: 23/JUNE/2025


ಸಾಬ್ರ ಹೆಸರಿಗೆ ಸರ್ಕಾರಿ ಜಮೀನು ಪರಭಾರೆ ಮಾಡಿದ್ರೆ ನೇಣು ಹಾಕ್ತಿನಿ : ಅಧಿಕಾರಿಗಳಿಗೆ ಧಮ್ಕಿ ಹಾಕಿದ ಕಾಂಗ್ರೆಸ್ ಶಾಸಕ!

ಮಂಡ್ಯ: ಬಗರ್ ಹುಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ (ಮುಸ್ಲಿಂ ಸಮುದಾಯದವರಿಗೆ) ಖಾತೆ ಮಾಡಬೇಡಿ. ಸರ್ಕಾರಿ ಜಮೀನು ಸರ್ಕಾರದ್ದಾಗಿಯೇ ಇರಬೇಕು. ಯಾರಾದರೂ ಅದನ್ನು ಸಾಬ್ರು ಹೆಸರಿನಲ್ಲಿ ಪರಭಾರೆ ಮಾಡಿದರೆ, ನೇಣಿಗೆ ಹಾಕುವುದು ಗ್ಯಾರಂಟಿ’ ಎಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅಧಿಕಾರಿಗಳಿಗೆ ಧಮ್ಕಿ ಹಾಕಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಹೌದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಬ್ರು ಹೆಸರಿಗೆ ನೊಂದಣಿ ಮಾಡದಂತೆ ಜನರ ಮುಂದೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದುವರೆಗೂ ಮುಸ್ಲಿಂರ ಪರ ಇದ್ದ ಶಾಸಕ ಇದೀಗ ಸಾಬ್ರು ಎಂದು ಉಲ್ಟಾ ಹೊಡೆದಿದ್ದಾರೆ. ಬಂಡಿಸಿದ್ದೇಗೌಡರ ಈ ಒಂದು ಹೇಳಿಕೆಗೆ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದೆ.
ಕಾರ್ಯಕ್ರಮದ ಬಳಿಕ ಅಧಿಕಾರಿಗಳಿಗೆ ಬಹಿರಂಗವಾಗಿ ಧಮ್ಮಿ ಹಾಕಿದ್ದಾರೆ. ಬಗರ್ ಉಕ್ಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ ಖಾತೆ ಮಾಡದಂತೆ ತಾಕೀತು ಮಾಡಿದ್ದಾರೆ. ಸರ್ಕಾರಿ ಜಮೀನು ಸರ್ಕಾರಕ್ಕೆ ಇರಬೇಕು. ಯಾರಾದ್ರು ಅದನ್ನ ಸಾಬ್ರು ಹೆಸ್ರಿಗೆ ಮಾಡಿದ್ರೆ ನೇಣಾಕೋದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.