ಡೈಲಿ ವಾರ್ತೆ: 23/JUNE/2025

ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕೋಟತಟ್ಟು ಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

ಕೋಟ: ರಾಜ್ಯ ಸರ್ಕಾರದ ಜನವಿರೋಧಿ ನೀತಿ, 9/11 ನಿವೇಶನಗಳ ಸಮಸ್ಯೆ, ಅಕ್ರಮ ಸಕ್ರಮ ಅರ್ಜಿಗಳ ತಿರಸ್ಕರಿಸುವುದನ್ನು ವಿರೋಧಿಸಿ , ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ ಪಿಂಚಣಿ ರದ್ದತಿ ಆಕ್ಷೇಪಿಸಿ, ಆಶ್ರಯ ಮನೆಗಳ ಬಿಡುಗಡೆಗೆ ಒತ್ತಾಯಿಸಿ, ವಿದ್ಯುತ್ ದರ ಏರಿಕೆ ಖಂಡಿಸಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ವಿಧಾನಸಭಾ ವತಿಯಿಂದ ಕೋಟತಟ್ಟು ಶಕ್ತಿ ಕೇಂದ್ರದ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಸೋಮವಾರ ಕೋಟತಟ್ಟು ಪಂಚಾಯತ್ ವಠಾರದಲ್ಲಿ ನಡೆಯಿತು.

ಪ್ರತಿಭಟನಾಕರಾರು ಸರಕಾರ, ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಸರಕಾರ 60% ಶೇಕಡಾ ಕಮಿಷನ್ ಕಲೆಕ್ಷನ್ ನಲ್ಲಿ ಮಗ್ನವಾಗಿದೆ. ವಿವಿಧ ಇಲಾಖೆ ಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಜನರ ಕೆಲಸಗಳು ಆಗುತಿಲ್ಲ. ಗ್ಯಾರಂಟಿ ನೀಡುವ ನೆಪದಲ್ಲಿ ಮತ್ತೊಂದು ಕಡೆಯಿಂದ ಜನರನ್ನು ಲೂಟಿ ಮಾಡುತ್ತಿದೆ ಎಂದು ಹೇಳಿದರು.

ಕೋಟತಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೋದ್ ಹಂದೆ, ಪ್ರಧಾನ ಕಾರ್ಯದರ್ಶಿ ವಾಸು ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ, ಉಪಾಧ್ಯಕ್ಷೆ ಶ್ರೀಮತಿ ಸರಸ್ವತಿ, ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ, ಮಂಡಲದ ಉಪಾಧ್ಯಕ್ಷರಾದ ಶ್ರೀಮತಿ ಅಶ್ವಿನಿ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ವಿದ್ಯಾ ಸಾಲಿಯಾನ್, ಎಸ್ ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕೆ ಸೀತಾ, ಕುಂದಾಪುರ ಹಿಂದುಳಿದ ಮೋರ್ಚಾ ಗಳ ಕಾರ್ಯದರ್ಶಿ ರಾಜು, ಕೋಟತಟ್ಟು ಎಲ್ಲಾ ಬೂತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಬಿಜೆಪಿ ಕಾರ್ಯಕರ್ತರು, ಫಲಾನುಭವಿಗಳು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.