



ಡೈಲಿ ವಾರ್ತೆ: 24/JUNE/2025


ರಾಜ್ಯ ಸರಕಾರದ ವಿರುದ್ಧ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಸರಕಾರಿ ನೌಕರ ಭಾಗಿ – ಕಾಂಗ್ರೆಸ್ ಮುಖಂಡ ಹರೀಶ್ ತೋಳರ್ ಖಂಡನೆ!

ಕುಂದಾಪುರ: ಸರಕಾರದ ವಿರುದ್ದ ಜೂ. 23 ರಂದು ಬಿಜೆಪಿ ಪಕ್ಷ ರಾಜ್ಯಾದ್ಯಂತ ಹಮ್ಮಿಕೊಂಡ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರಿ ನೌಕರನೋರ್ವ ಪಾಲ್ಗೊಂಡ ಪ್ರಕರಣದ ಬಗ್ಗೆ ಕಾಂಗ್ರೆಸ್ ಮುಖಂಡರಾದ ಹರೀಶ್ ತೋಳರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಲ್ಲೂರು ಮುಕಾಂಬಿಕಾ ದೇವಸ್ಥಾನ ಸಿಬ್ಬಂದಿಯಾಗಿರುವ ಜಗದೀಶ್ ದೇವಾಡಿಗ ಇವರು ಪ್ರತಿಭಟನೆ ಸಂದರ್ಭದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರ ಜೊತೆಗೆ ಇದ್ದು ಸರಕಾರದ ವಿರುದ್ದದ ಸಭೆಯಲ್ಲಿ ಭಾಗವಹಿಸಿದ ಫೋಟೋ ಎಲ್ಲೆಡೆ ವೈರಲ್ ಆಗುತ್ತಿದೆ.
ಕೂಡಲೇ ಕೊಲ್ಲೂರು ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಆಡಳಿತ ಮಂಡಳಿ ಈ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಹರೀಶ್ ತೋಳರ್ ಅಗ್ರಹಿಸಿದ್ದಾರೆ.