ಡೈಲಿ ವಾರ್ತೆ: 25/JUNE/2025

ಕಲಬುರಗಿ| ತಡರಾತ್ರಿ ಡಾಬಾಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಬರ್ಬರ ಹತ್ಯೆ.!

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ತ್ರಿಬಲ್​ ಮರ್ಡರ್​ನಿಂದಾಗಿ ಸ್ಥಳೀಯ ಜನರಲ್ಲಿ ಆತಂಕ ಮೂಡಿದೆ.

ಸಿದ್ಧಾರೂಢ (32), ಜಗದೀಶ್ (25) ಮತ್ತು ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದೆ.
ಈ ಮೂವರು ಸಂಬಂಧಿಕರಾಗಿದ್ದು, ಮಂಗಳವಾರ ತಡರಾತ್ರಿ 1.30ರ ಸುಮಾರಿಗೆ ಪಟ್ಟಣ ಗ್ರಾಮದ ಬಳಿ ಇರುವ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇವರನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಘಟನೆಗೆ ಹಳೆ ದ್ವೇಷವೇ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್‌ಅರ್ಬನ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಸಬ್‌ಅರ್ಬನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.