ಡೈಲಿ ವಾರ್ತೆ: 27/JUNE/2025

ಎಕ್ಸಲೆಂಟ್ ಪಿಯು ಕಾಲೇಜ್ ಸುಣ್ಣಾರಿಯಲ್ಲಿ ಕಾನೂನು ಅರಿವು, ನಶಾ ಮುಕ್ತ ಭಾರತ:
ಮಾದಕ ವಸ್ತುಗಳಿಂದ ದೂರ ಇದ್ದು ವಿದ್ಯಾರ್ಥಿ ಜೀವನವನ್ನು ಯಶಸ್ವಿಗೊಳಿಸಿ: ಕೋಟ ಎಸ್.ಐ ರಾಘವೇಂದ್ರ ಸಿ

ಕುಂದಾಪುರ: ದೇಶದಲ್ಲಿ ಮಾದಕ ವ್ಯಸನವು ಗಂಭೀರ ಕಳವಳಕಾರಿ ವಿಷಯವಾಗಿ ಹೊರಹೊಮ್ಮುತ್ತಿದೆ. ವಿಶೇಷವಾಗಿ ಯುವ ಪೀಳಿಗೆಯಲ್ಲಿ. ಇದು ಮಾದಕ ದ್ರವ್ಯಗಳನ್ನು ಬಳಸುವ ವ್ಯಕ್ತಿಗೆ ಮಾತ್ರವಲ್ಲದೆ, ಕುಟುಂಬ ಮತ್ತು ಸಮಾಜಕ್ಕೂ ಅಪಾಯಕಾರಿ ಪರಿಣಾಮಗಳಿಗೆ ಕಾರಣವಾಗುತ್ತದೆ ಎಂದು ಕೋಟ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಘವೇಂದ್ರ ಸಿ. ಹೇಳಿದರು.

ಕುಂದಾಪುರ ಎಕ್ಸಲೆಂಟ್ ಪಿಯು ಕಾಲೇಜು ಸುಣ್ಣಾರಿಯಲ್ಲಿ ಶುಕ್ರವಾರ ನಡೆದ ಕಾನೂನು ಅರಿವು ಮತ್ತು ನಶಾ ಮುಕ್ತ ಭಾರತ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಸಾಮಾನ್ಯವಾಗಿ ಮಾದಕ ಪದಾರ್ಥಗಳ ಸೇವನೆಯು ಹತ್ತಿರದ ಸ್ನೇಹಿತರ ಪ್ರೇರಣೆಗೆ ಒಳಗಾಗಿ ಆರಂಭವಾಗಿ ನಂತರ ಚಟವಾಗಿ ಪರಿಣಮಿಸುತ್ತದೆ. ಮಾದಕ ಪದಾರ್ಥಗಳ ಸೇವನೆಯಿಂದ ಅಲ್ಪಾವಧಿ ಮತ್ತು ದೀರ್ಘಾವಧಿ ಗಂಭೀರ ತೀವ್ರತರವಾದ ಆರೋಗ್ಯ ಮತ್ತು ಮಾನಸಿಕ ಸಮಸ್ಯೆಗಳು ಎದುರಾಗುತ್ತವೆ. ಆದ್ದರಿಂದ ಮಾದಕ ವಸ್ತುಗಳಿಂದ ದೂರ ಇದ್ದು ವಿದ್ಯಾರ್ಥಿ ಜೀವನವನ್ನು ಯಶಸ್ವಿಗೊಳಿಸಿ ಎಂದು ಅವರು ಕರೆ ನೀಡಿದರು.

ಕಾನೂನು ಅರಿವು ಬಗ್ಗೆ ಮಾತನಾಡಿ ವಿದ್ಯಾರ್ಥಿಗಳು ಮೋಟಾರ್ ಆ್ಯಕ್ಟ್ ಕುರಿತು ತಿಳಿದುಕೊಳ್ಳಬೇಕು. ಅದೇ ರೀತಿ ಮೂಲ ಹಕ್ಕುಗಳ ಬಗ್ಗೆಯೂ ಮಾಹಿತಿ ಹೊಂದಿರಬೇಕು. ಪ್ರಮುಖವಾಗಿ ಕಾನೂನನ್ನು ಯಾವ ಸಂದರ್ಭದಲ್ಲಿ ಕೈಗೆತ್ತಿಕೊಳ್ಳಬಾರದು ಎನ್ನುವುದರ ಬಗ್ಗೆ ಮಾಹಿತಿ ನೀಡಿದರು.

ಫೋಸ್ಕೋ ಕಾಯ್ದೆಯು ಮಹಿಳೆಯರು, ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುವ ದೌರ್ಜನ್ಯ ತಡೆಯುವುದಾಗಿದೆ. ಈ ಕಾಯ್ದೆ ಅತ್ಯಂತ ಬಲಿಷ್ಠವಾಗಿದ್ದು, ಆರೋಪಿಗಳಿಗೆ ಯಾವ ರೀತಿ ಕಠಿಣ ಶಿಕ್ಷೆಗೆ ಒಳಪಡಿಸಲಾಗುತ್ತದೆ ಎನ್ನುವುದರ ಬಗ್ಗೆ ತಿಳಿಸಿ,
ಹೆತ್ತವರು ತಮ್ಮ ಮೇಲೆ ಆಸೆ ಆಕಾಂಕ್ಷೆ ಇಟ್ಟಿರುತ್ತಾರೆ. ಆದ್ದರಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಕೌಶಲಗಳು ಬಹಳ ಅಗತ್ಯ. ಅದನ್ನು ಕಲಿಯಿರಿ ಎಂದು ಅವರು ಹೇಳಿದರು.


ಎಕ್ಸಲೆಂಟ್ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳು ಸಭೆಯಲ್ಲಿ ಮಾದಕ ವ್ಯಸನದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು

ಎಕ್ಸಲೆಂಟ್ ಸಂಸ್ಥೆಯ ಪ್ರಾಂಶುಪಾಲ ನಾಗರಾಜ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಕ್ಸಲೆಂಟ್ ಹೈಸ್ಕೂಲ್‌ನ ಮುಖ್ಯೋಪಾಧ್ಯಾಯಿನಿ ಸರೋಜಿನಿ. ಪಿ. ಆಚಾರ್ಯ ಸ್ವಾಗತಿಸಿದರು.
ಶಿಕ್ಷಕ ಶ್ರೀನಿವಾಸ್ ವೈದ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.