



ಡೈಲಿ ವಾರ್ತೆ: 28/JUNE/2025


ಪಾರಂಪಳ್ಳಿ ಪಡುಕರೆಯಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀಶನೀಶ್ವರ ದೇವಸ್ಥಾನಕ್ಕೆ ಮಾಜೀ ಸಚಿವ,ಸಂಸದ ಜಯಪ್ರಕಾಶ್ ಹೆಗ್ಡೆ ಭೇಟಿ

ಕೋಟ: ಪಾರಂಪಳ್ಳಿ ಪಡುಕೆರೆಯಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀ ಶನೀಶ್ವರ ದೇವಸ್ಥಾನಕ್ಕೆ ಮಾಜಿ ಸಚಿವರು, ಸಂಸದರು ಆಗಿರುವ ಜಯಪ್ರಕಾಶ್ ಹೆಗ್ಡೆ ಭೇಟಿ ನೀಡಿದರು.

ನೂತನ ದೇವಸ್ಥಾನ ನಿರ್ಮಾಣ ಸಂದರ್ಭದಲ್ಲಿ ಸಾಕಷ್ಟು ಸಹಕಾರ ನೀಡಿದನ್ನು ಸ್ಮರಿಸಿಕೊಂಡ ದೇವಸ್ಥಾನದ ಆಡಳಿತ ಮಂಡಳಿಯವರು, ದೇವರ ಪ್ರಸಾದ ನೀಡಿ ಶಾಲು ಹೊದಿಸಿ ಫಲ ಪುಷ್ಪ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಶೇಖರ್ ಪೂಜಾರಿ, ಕಾರ್ಯದರ್ಶಿ ಸತೀಶ್ ಮೆಂಡನ್, ರಾಮ ಬಂಗೇರ, ರಾಜು ಪೂಜಾರಿ, ಜಬ್ಬಾ ಮೆಂಡನ್, ಗಣೇಶ್ ಮೊಗವೀರ, ಗಣೇಶ್ ಪೂಜಾರಿ, ನಾಗೇಶ್, ದಿನೇಶ್, ಆನಂದ್, ರಾಜು, ರತ್ನಾಕರ್, ಶಂಕರ್ ಮುಂತಾದವರು ಉಪಸ್ಥಿತರಿದ್ದರು.