



ಡೈಲಿ ವಾರ್ತೆ: 29/JUNE/2025


ಬ್ರಹ್ಮಾವರ: ಕುಂಜಾಲು ಸಮೀಪ ದನದ ರುಂಡ ಪತ್ತೆ! ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆಕ್ರೋಶ

ಬ್ರಹ್ಮಾವರ: ತಾಲ್ಲೂಕಿನ ಕುಂಜಾಲು ಬಸ್ ನಿಲ್ದಾಣದ ಸಮೀಪ ದುಷ್ಕರ್ಮಿಗಳು ದನದ ರುಂಡ ಎಸೆದಿದ್ದಾರೆ.
ಶನಿವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು , ದನದ ತಲೆಯನ್ನು ದುಷ್ಕರ್ಮಿಗಳು ರಸ್ತೆಯಲ್ಲೇ ಎಸೆದು ಹೋಗಿದ್ದಾರೆ.
ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥರ ಪತ್ತೆಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ.
ಪ್ರಕರಣದ ಬಗ್ಗೆ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.